ಕಂಡೆ ನಾ ಗೋವಿಂದನ

ಕಂಡೆ ನಾ ಗೋವಿಂದನ
ಪುಂಡರೀಕಾಕ್ಷ ಪಾಂಡವಪಕ್ಷ ಕೃಷ್ಣನ



ಕೇಶವ ನಾರಾಯಣ ಶ್ರೀಕೃಷ್ಣನ
ವಾಸುದೇವ ಅಚ್ಯ್ತುತಾನಂತನ
ಸಾಸಿರನಾಮನ ಶ್ರೀ ಹೃಷೀಕೇಶನ
ಶೇಷಶಯನ ನಮ್ಮ ವಸುದೇವಸುತನ



ಮಾಧವ ಮಧುಸೂದನ ತ್ರಿವಿಕ್ರಮ
ಯಾದವಕುಲ ಜನ ಮುನಿವಂದ್ಯನ
ವೇದಾಂತವೇದ್ಯನ ಇಂದಿರಾರಮಣನ
ಆದಿಮೂರುತಿ ಪ್ರಹ್ಲಾದವರದನ



ಪುರುಷೋತ್ತಮ ನರಹರಿ ಶ್ರೀಕೃಷ್ಣನ
ಶರಣಾಗತ ವಜ್ರಪಂಜರನ
ಕರುಣಾಕರ ನಮ್ಮ ಪುರಂದರವಿಠಲನ
ನೆರೆ ನಂಬಿದೆ ಬೇಲೂರ ಕೇಶವನ

No comments: