ನಿಂದಕರಿರಬೇಕಿರಬೇಕು




ನಿಂದಕರಿರಬೇಕಿರಬೇಕು
ಹಂದಿಯಿದ್ದರೆ ಕೇರಿ ಹ್ಯಾಂಗೆ ಶುದ್ದಿಯೋ ಹಾಂಗೆ


ಅಂದಂದು ಮಾಡಿದ ಪಾಪವೆಂಬ ಮಲ
ತಿಂದು ಹೋಗುವರಯ್ಯ ನಿಂದಕರು
ವಂದಿಸಿ ಸ್ತುತಿಸುವ ಜನರೆಲ್ಲರು ನಮ್ಮ
ಪೊಂದಿದ ಪುಣ್ಯವನೊಯ್ಯುವರಯ್ಯ


ದುಷ್ಟಜನರು ಈ ಸೃಷ್ಟಿಯೊಳಿದ್ದರೆ
ಶಿಷ್ಟ ಜನರಿಗೆಲ್ಲ ಕೀರ್ತಿಗಳು
ಇಷ್ಟಪ್ರದ ಶ್ರೀಕೃಷ್ಣ ನಿನ್ನೊಳು
ಇಷ್ಟೇ ವರವನು ಬೇಡುವೆನಯ್ಯ


ದುರುಳ ಜನಂಗಳು ಚಿರಕಾಲವಿರುವಂತೆ
ಕರವ ಮುಗಿದು ವರವ ಬೇಡುವೆನು
ಪರಿಪರಿ ತಮಸಿಗೆ ಗುರಿಯಹರಲ್ಲದೆ
ಪರಮ ದಯಾನಿಧೆ ಪುರಂದರವಿಠಲ

No comments: