
ಮಾನವ ಜನ್ಮ ದೊಡ್ಡದು ಇದ
ಹಾನಿ ಮಾಡಲಿಬೇಡಿ ಹುಚ್ಹಪ್ಪಗಳಿರಾ
ಕಣ್ಣು ಕೈ ಕಾಲ್ ಕಿವಿ ನಾಲಿಗೆ ಇರಲಿಕ್ಕೆ
ಮಣ್ಣು ಮುಕ್ಕಿ ಮರುಳಾಗುವರೆ
ಹೆಣ್ಣು ಮಣ್ಣಿಗಾಗಿ ಹರಿಯ ನಾಮಮೃತ
ಉಣ್ಣದೆ ಉಪವಾಸ ಇರುವರೆ ಖೋಡಿ
ಕಾಲನ ದೂತರು ಕಾಲ್ ಪಿಡಿದೆಳೆವಾಗ
ತಾಳು ತಾಳೆಂದರೆ ತಾಳುವರೆ
ದಾಳಿ ಬಾರದ ಮುನ್ನ ಧರ್ಮವ ಗಳಿಸಿರೊ
ಸುಳ್ಳಿನ ಸಂಸಾರ ಸುಳಿಗೆ ಸಿಕ್ಕಲುಬೇಡಿ
ಏನು ಕಾರಣ ಯದುಪತಿಯನು ಮರೆತಿರಿ
ಧನ ಧಾನ್ಯ ಸತಿಸುತರು ಕಾಯುವರೆ
ಇನ್ನಾದರು ಏಕೋಭಾವದಿ ಭಜಿಸಿರೊ
ಚೆನ್ನ ಶ್ರೀ ಪುರಂದರವಿಟ್ಠಲರಾಯನ
No comments:
Post a Comment