ಅನುಭವದಡುಗೆಯ ಮಾಡಿ

ಅನುಭವದಡುಗೆಯ ಮಾಡಿ ಅದ-
ಕ್ಕನುಭವಿಗಳು ಬಂದು ನೀವೆಲ್ಲ ಕೂಡಿ


ತನುವೆಂಬ ಬಾಂಢವ ತೊಳೆದು ಕೆಟ್ಟ
ಮನದ ಚಂಚಲವೆಂಬ ಮುಸುರೆಯ ಕಳೆದು
ಘನವಾಗಿ ಮನೆಯನ್ನು ಬಳಿದು ಅಲ್ಲಿ
ಮಿನುಗುವ ತ್ರಿಗುಣದ ಒಲೆಗುಂಡುನೆಡೆದು


ವಿರಕ್ತಿಯೆಂಬುವ ಮಡಿಯುಟ್ಟು ಪೂರ್ಣ
ಹರಿಭಕ್ತಿಯೆಂಬ ನೀರನ್ನೆಸರಿಟ್ಟು
ಅರಿವೆಂಬ ಬೆಂಕಿಯ ಕೊಟ್ಟು ಮಾಯಾ
ಮರೆವೆಂಬ ಕಾಷ್ಠವ ಮುದದಿಂದ ಸುಟ್ಟು


ಶರಣೆಂಬೊ ಸಾಮಗ್ರಿ ಹೂಡಿ ಮೋಕ್ಷ
ಪರಿಕರವಾದಂಥ ಪಾಕವ ಮಾಡಿ
ಗುರು ಶರಣರು ಸವಿದಾಡಿ ನಮ್ಮ ಪುರಂ-
ದರವಿಠಲನ ಬಿಡದೆ ಕೊಂಡಡಿ

No comments: