ಯಾರಿಗೆ ಯಾರುಂಟು ಎರವಿನ ಸಂಸಾರ

ಯಾರಿಗೆ ಯಾರುಂಟು ಎರವಿನ ಸಂಸಾರ
ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೇ

ಬಾಯಾರಿತು ಎಂದು ಬಾವಿನೀರಿಗೆ ಪೋದೆ
ಬಾವಿಲಿ ಜಲ ಬತ್ತಿ ಬರಿದಾಯ್ತು ಹರಿಯೆ

ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ
ಮರ ಬಗ್ಗಿ ಶಿರದ ಮೇಲೊರಗಿತೋ ಹರಿಯೆ

ಅಡವಿಯೊಳ್ಮನೆಮಾಡಿ ಗಿಡಕೆ ತೊಟ್ಟಿಲು ಕಟ್ಟಿ
ತೊಟ್ಟಿಲಿನ ಶಿಶು ಮಾಯವಾಯಿತು ಹರಿಯೆ

ತಂದೆ ಶ್ರೀ ಪುರಂದರವಿಠಲ ನಾರಾಯಣ
ನಾ ಸಾಯೊ ಹೊತ್ತಿಗೆ ನೀ ಕಾಯೊ ಹರಿಯೆ

No comments: