ನಾ ಮಾಡಿದ ಕರ್ಮ ಬಲವಂತವಾದರೆ

ನಾ ಮಾಡಿದ ಕರ್ಮ ಬಲವಂತವಾದರೆ
ನೀ ಮಾಡುವದೇನೊ ದೇವ


ಸಾಮಾನ್ಯವಲ್ಲವಿದು ಬ್ರಹ್ಮ ಬರೆದ ಬರಹ
ನೇಮದಿಂದಲಿ ಎನ್ನ ಹಣಿಯಲಲ್ಲಿ ಬರೆದುದಕೆ


ಅನ್ನಪಾನಂಗಳಿಗೆ ಅಗ್ರಗಣ್ಯನಾಗಿ
ಸ್ನಾನ ಸಂಧ್ಯಾನ ಜಪತಪ ನೀಗಿ
ದಾನವಂತಕ ನಿನ್ನ ಧ್ಯಾನವ ಮಾಡದೆ
ಶ್ವಾನನಂತೆ ಮನೆಮನೆಯ ತಿರುಗುತಲಿದ್ದೆ


ಅತಿಥಿಗಲಿಗೆ ಅನ್ನ ಕೊಟ್ಟವನಲ್ಲ ಪರ-
ಸತಿಯರ ಸಂಗ ಅರಘಳಿಗೆ ಬಿಟ್ಟವನಲ್ಲ
ಮತಿಹೀನ ನಾನಾಗಿ ಮರುಳಾಗಿದ್ದೆನೊ ದೇವ
ಗತಿ ಯಾವುದೆನಗಿನ್ನು ಗರುಡುಗಮನ ಕೃಷ್ಣ


ಇನ್ನಾದರು ನಿನ್ನ ದಾಸರ ಸಂಗವಿತ್ತು
ಮನ್ನಿಸಿ ಸಲಹಯ್ಯ ಮನ್ಮಥಜನಕ
ಅನ್ಯರೊಬ್ಬರ ಕಾಣೆ ಆದರಿಸುವರಿಲ್ಲ
ಪನ್ನಂಗಶಯನ ಶ್ರೀ ಪ್ರುರಂದರವಿಠಲ

No comments: