
ನೀ ಮಾಡುವದೇನೊ ದೇವ
ಸಾಮಾನ್ಯವಲ್ಲವಿದು ಬ್ರಹ್ಮ ಬರೆದ ಬರಹ
ನೇಮದಿಂದಲಿ ಎನ್ನ ಹಣಿಯಲಲ್ಲಿ ಬರೆದುದಕೆ
ಅನ್ನಪಾನಂಗಳಿಗೆ ಅಗ್ರಗಣ್ಯನಾಗಿ
ಸ್ನಾನ ಸಂಧ್ಯಾನ ಜಪತಪ ನೀಗಿ
ದಾನವಂತಕ ನಿನ್ನ ಧ್ಯಾನವ ಮಾಡದೆ
ಶ್ವಾನನಂತೆ ಮನೆಮನೆಯ ತಿರುಗುತಲಿದ್ದೆ
ಅತಿಥಿಗಲಿಗೆ ಅನ್ನ ಕೊಟ್ಟವನಲ್ಲ ಪರ-
ಸತಿಯರ ಸಂಗ ಅರಘಳಿಗೆ ಬಿಟ್ಟವನಲ್ಲ
ಮತಿಹೀನ ನಾನಾಗಿ ಮರುಳಾಗಿದ್ದೆನೊ ದೇವ
ಗತಿ ಯಾವುದೆನಗಿನ್ನು ಗರುಡುಗಮನ ಕೃಷ್ಣ
ಇನ್ನಾದರು ನಿನ್ನ ದಾಸರ ಸಂಗವಿತ್ತು
ಮನ್ನಿಸಿ ಸಲಹಯ್ಯ ಮನ್ಮಥಜನಕ
ಅನ್ಯರೊಬ್ಬರ ಕಾಣೆ ಆದರಿಸುವರಿಲ್ಲ
ಪನ್ನಂಗಶಯನ ಶ್ರೀ ಪ್ರುರಂದರವಿಠಲ
No comments:
Post a Comment