ಇಂದು ನಾನೇನು ಸುಕೃತವ ಮಾಡಿದೆನೋ

ಇಂದು ನಾನೇನು ಸುಕೃತವ ಮಾಡಿದೆನೋ
ಮಂಗಳ ಮಹಿಮ ವೇಂಕಟ ಬಂದ ಮನೆಗೆ


ಹಾರಕೇಯೂರ ಹೊನ್ನುಂಗುರ ಬೆರಳು
ಹಾರದ ನಡುವೆ ಹಾಕಿದವೇಳು ಪದಕ
ತೋರಮುತ್ತಿನ ಕಂಠಮಾಲೆ ಸರಿಗೆಯು ಕೋ-
ನೇರಿವಾಸ ವೇಂಕಟ ಬಂದ ಮನೆಗೆ


ಕಾಲಪೆಂಡಿಗೆಯು ರಕ್ಕಸರ ಹಾವಿಗೆಯು
ಮೇಲಾದ ವಜ್ರನವರತ್ನದ ಮಕುಟ
ವೀಳ್ಯದ ಬಾಯಿ ಕರ್ಪೂರದ ಕರಡಿಗೆಯು
ಮೇಲುಗಿರಿವಾಸ ವೇಂಕಟ ಬಂದ ಮನೆಗೆ


ಬಿಗಿದು ಸುತ್ತಿದ ವಲ್ಲಿ ಬಿಡಿಮುತ್ತಿನ ಕಂಠಿ
ಬಿಗಿ ಮುಗುಳುನಗೆ ದಂತ ಎಸೆವಂಥ ಪಙ್ತೆ
ತೆಗೆದುಟ್ಟ ಪೀತಾಂಬರ ಉಡುಗೆ ಕಠಾರಿ
ಯದುಗಿರಿವಾಸ ವೇಂಕಟ ಬಂದ ಮನೆಗೆ


ನೊಸಲ ಸುತ್ತಿದ ಪಟ್ಟೆ ಎಸೆವೊ ಕಸ್ತುರಿಯು
ವಶವಾದ ಅಮೃತದ ರಸ ಸವಿಮಾತು
ಎಸಳುಕಂಗಳ ನೋಟ ಹೊಸ ಪಂಚಬಾಣ
ಸುಕುಮಾರ ಸೊಬಗು ವೇಂಕಟ ಬಂದ ಮನೆಗೆ


ಕಲಿಯುಗದಲಿ ಶಂಖಚಕ್ರವ ಧರಿಸಿ
ಹದಿನಾಲ್ಕುಲೋಕ ತನ್ನುದರದಲ್ಲಿಟ್ಟು
ಗರುಡನ ಏರಿ ಮೂರ್ಜಗವ ಮೋಹಿಸುವ
ಪುರಂದರವಿಠಲ ವೇಂಕಟ ಬಂದ ಮನೆಗೆ

3 comments:

Sushrutha Dodderi said...

ಪ್ರಿಯ ವಿನೋದ್,
ನಮಸ್ಕಾರ. ಹೇಗಿದ್ದೀರಿ?

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ 'ಪ್ರಣತಿ', ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, 'ದಟ್ಸ್ ಕನ್ನಡ'ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, 'ಸಂಪದ'ದ ಹರಿಪ್ರಸಾದ್ ನಾಡಿಗ್, 'ಕೆಂಡಸಂಪಿಗೆ'ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, 'ಪ್ರಣತಿ'ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಸುಶ್ರುತ ದೊಡ್ಡೇರಿ

Unknown said...

ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ - ದಾಸರ ಎಲ್ಲ ಕೃತಿಗಳನ್ನೂ ಬ್ಲಾಗಿನಲ್ಲಿರಿಸಿ ಸಂಪದ್ಭರಿತವಾಗಿಸಿ ಎಂದು ಕೇಳಿಕೊಳ್ಳುವೆ

ಗುರುದೇವ ದಯಾ ಕರೊ ದೀನ ಜನೆ

B.Manjula said...

Hariom, your efforts are amazing, krishna kripalu nimmannu heege chennagi ittirali, haage bhagavathathada bagge prachara madi