
ನಂಬದೆ ಕೆಟ್ಟರೆ ಕೆಡಲಿ
ಅಂಬುಜನಾಭನ ಅಖಿಳ ಲೋಕೇಶನ
ಅಪ್ರಮೇಯನಾದ ಆದಿಪುರುಷನ
ಪಿತನ ತೊಡೆಯ ಮೇಲೆ ಧ್ರುವರಾಯ
ಹಿತದಿಂದ ಕುಳಿತಿರಲು
ಮತಿಹೀನಳಾದ ಸುರುಚಿದೇವಿ ನೂಕಲು
ಹಿತದಿ ಧ್ರುವಗೆ ಪಟ್ಟ ಕೊಟ್ಟ ಮುರಾರಿಯ
ವರ ಪ್ರಹ್ಲಾದನ ಪಿತನು ಬಾಧಿಸುತಿರೆ
ಹರಿ ನೀನೆ ಗತಿಯೆನಲು
ಪರಮ ಪ್ರೀತಿಯಿಂದ ತರಳನ ಪಾಲಿಸಿ
ದುರುಳ ಹಿರಣ್ಯಕಶ್ಯಪನ ಸೀಳಿದ ಧೊರೆಯ
ಕರಿರಾಜನ ಸಲಹಿ ಅಂಜದಿರೆಂದು ಅ-
ದರಿಸಿದವರು ಯಾರೋ
ಗರುಡಗಮನ ಶ್ರೀ ಪುರಂದರವಿಠಲನ
ಚರಣಕಮಲವನ್ನು ದೃಢದಿಂದ ನಂಬಿರೊ
No comments:
Post a Comment