ಗುರುರಾಯರ ನಂಬಿರೊ ಮಾರುತಿಯೆಂಬ


ಗುರುರಾಯರ ನಂಬಿರೊ ಮಾರುತಿಯೆಂಬ
ಗುರುರಾಯರ ನಂಬಿರೊ

ಗುರುರಾಯರ ನಂಬಿ ಬಿಡದೆ ಯಾವಾಗಲು
ದುರಿತವ ಕಳೆದು ಸದ್ಗತಿಯ ಪಡೆವರೆಲ್ಲ

ವನಧಿಯ ಮನೋವೇಗದಿ ಲಂಘಿಸಿ ಮಹಿ-
ತನುಜೆ ಶೋಕವ ತರಿದು
ವನವ ಬೇರೊಡನೆ ಕಿತ್ತೀಡಾಡಿ ಎದುರಾದ
ದನುಜರ ಸದೆದು ಲಂಕೆಯ ತನ ಸಖಗಿತ್ತ

ಕೌರವ ಬಕ ಹಿಡಿಂಬ ಕೀಚಕರೆಂಬ
ದುರುಳ ಸಂತತಿ ನೆಗ್ಗೊತ್ತಿ
ಘೋರಪಾತಕಿ ದುಶ್ಯಾಸನನ ರಕುತವ
ಹೀರಿ ಮುದದಿ ಮುರವೈರಿಯ ಭಜಿಸಿದ

ಜೀವೇಶರೊಂದೆಂಬುವ ದುರ್ವಾದಿಯ ಅ-
ಭಾವ ಶಾಸ್ತ್ರಗಳೋಡಿಸಿ
ಕೋವಿದರಿಗೆ ಸದ್ಭಾಷ್ಯವ ತೋರಿದ
ದೇವ ಪುರಂದರವಿಠಲ ಸೇವಕರಾದ

No comments: