ಅಂಜಿಕಿನ್ಯಾತಕಯ್ಯಾ ಸಜ್ಜನರಿಗೆ


ಅಂಜಿಕಿನ್ಯಾತಕಯ್ಯಾ ಸಜ್ಜನರಿಗೆ
ಭಯವು ಇನ್ಯಾತಕಯ್ಯಾ

ಸಂಜೀವರಾಯರ ಸ್ಮರಣೆ ಮಾಡಿದ ಮೇಲೆ

ಕನಸಿಲಿ ಮನಸಿಲಿ ಕಳವಳವಾದರೆ
ಹನುಮನ ನೆನೆದರೆ ಹಾರಿಹೋಗದೆ ಭೀತಿ

ರೋಮ ರೋಮಕೆ ಕೋಟಿ ಲಿಂಗವುದುರಿಸಿದ
ಭೀಮನ ನೆನೆದರೆ ಬಿಟ್ಟು ಹೋಗದೆ ಭೀತಿ

ಪುರಂದರವಿಠಲನ ಪೂಜೆಯ ಮಾಡುವ
ಗುರು ಮಧ್ವರಾಯರ ಸ್ಮರಣೆ ಮಾಡಿದ ಮೇಲೆ

No comments: