
ಪುಟ್ಟಿದೇಳು ದಿವಸದಲಿ ದುಷ್ಟ ಪೂತನಿಯ ಕೊಂದೆ
ಮುಟ್ಟಿ ವಿಷದ ಮೊಲೆಯುಂಡ ಕಾರಣ
ದೃಷ್ಟಿ ತಾಕಿತೆ ನಿನಗೆ ರಂಗಯ್ಯ
ಬಾಲಕತನದಿ ಗೋಪಾಲಕರೊಡಗೂಡಿ
ಕಾಳಿಂದಿ ಮಾಡುವನು ಕಲಕಿದ ಕಾರಣ
ಕಾಲು ಉಳುಕಿತೆ ನಿನಗೆ ರಂಗಯ್ಯ
ತುರುವ ಕಾಯಲು ಪೋಗೆ ಭರದಿ ಇಂದ್ರ ಮಳೆಗರೆಯೆ
ಬೆರಳಲಿ ಬೆಟ್ಟವನೆತ್ತಿದ ಕಾರಣ
ಬೆರಳು ಉಳುಕಿತೆ ನಿನಗೆ ರಂಗಯ್ಯ
ವಾಸುದೇವ ಸುತನಾಗಿ ಅಸುರರೆಲ್ಲರ ಮಡುಹಿ
ಹೆಸರಿನ ಮಲ್ಲರ ಮಡುಹಿದ ಕಾರಣ
ಕಿಸಿರು ತಾಕಿತೆ ನಿನಗೆ ರಂಗಯ್ಯ
ಶರಣು ವೇಲಾಪುರದ ಚೆಲುವ ಚೆನ್ನಿಗರಾಯ
ಪರಿಪರಿ ವಿಧದಿಂದ ಶರಣರ ಪೊರೆಯುವ
ವರದ ಪುರಂದರವಿಠಲರಾಯ
No comments:
Post a Comment