ಎಲ್ಲಾನು ಬಲ್ಲೆನೆಂಬುವಿರಲ್ಲ ಅವಗುಣ ಬಿಡಲಿಲ್ಲ


ಎಲ್ಲಾನು ಬಲ್ಲೆನೆಂಬುವಿರಲ್ಲ ಅವಗುಣ ಬಿಡಲಿಲ್ಲ 
ಸೊಲ್ಲಿಗೆ ಶರಣರ ಕಥೆಗಳ ಪೇಳುತ 
ಅಲ್ಲದ ನುಡಿಯನು ನುಡಿಯುವಿರಲ್ಲ 


ಕಾವಿಯನುಟ್ಟು ತಿರುಗುವಿರಲ್ಲ ಕಾಮವ ಬಿಡಲಿಲ್ಲ 
ನೇಮನಿಷ್ಟೆಗಳ ಮಾಡುವಿರಲ್ಲ ತಾಮಸ ಬಿಡಲಿಲ್ಲ 
ತಾವೊಂದರಿಯದೆ ಆಗಮ ತಿಳಿಯದೆ 
ಶ್ವಾನನ ಕುಳಿಯಲಿ ಬೀಳುವಿರಲ್ಲ 


ಗುರುಗಳ ಸೇವೆ ಮಾಡಿದಿರಲ್ಲ ಗುರುತಾಗಲಿಲ್ಲ 
ಪರಿಪರಿ ದೇಶವ ತಿರುಗಿದಿರಲ್ಲ ಪೋರೆಯುವರಿನ್ನಿಲ್ಲ 
ಅರಿವೊಂದರಿಯದೆ ಆಗಮ ತಿಳಿಯದೆ 
ನರಕ ಕೂಪದಲಿ ಬೀಳುವಿರಲ್ಲ 


ಬ್ರಹ್ಮ ಜ್ಞಾನಿಗಳು ಎನಿಸುವಿರಲ್ಲ ಹಮ್ಮು ಬಿಡಲಿಲ್ಲ 
ಸುಮ್ಮನೆ ಯಾಗವ ಮಾಡುವಿರಲ್ಲ  ಸುಳ್ಳನು ಬಿಡಲಿಲ್ಲ 
ಗಮ್ಮನೆ ಪುರಂದರವಿಠಲನ ಪಾದಕೆ 
ಹೆಮ್ಮೆ ಬಿಟ್ಟು ನೀವೆರಗಲೆ ಇಲ್ಲ 

No comments: