ಎಲ್ಲಿ ಶ್ರೀತುಳಸಿಯ ವನವು


ಎಲ್ಲಿ ಶ್ರೀತುಳಸಿಯ ವನವು 
ಅಲ್ಲೊಪ್ಪುವರು ಸಿರಿ-ನಾರಾಯಣರು 

ಗಂಗೆ ಯಮುನೆ ಗೋದಾವರಿ ಕಾವೇರಿ 
ಕಂಗೊಳಿಸುವ ಮನಿಕರ್ಣಿಕೆಯು 

ತುಂಗಭದ್ರೆ ಕೃಷ್ಣವೇಣಿ ತೀರ್ಥಗಳೆಲ್ಲ 
ಸಂಗಡಿಸುತ ವ್ರುಕ್ಷಮೂಲದಲ್ಲಿರುವವು 

ಸರಸಿಜಭವ ಭವ ಸುರಪ ಪಾವಕ ಚಂ-
ದಿರ ಸೂರ್ಯ ಮೊದಲಾದವರು 
ಸಿರಿರಮಣನ ಆಜ್ಞೆಯಲಿ ಅಗಲದಂತೆ 
ತರುಮಧ್ಯದೊಳು ನಿತ್ಯ ನೆಲಸಿಪ್ಪರು 

ಋಗ್ವೇದ ಯಜುರ್ವೇದ ಸಾಮ ಅಥರ್ವಣ 
ಅಗ್ಗಳಿಸಿದ ವೇದಘೋಷಗಳು 
ಅಗ್ರಭಾಗದಲಿದೆ ಬೆಟ್ಟದೊಡೆಯನಲ್ಲಿ 
ಶೀಘ್ರದಿ ಒಲಿವ ಶ್ರೀಪುರಂದರವಿಠಲ 

No comments: