ಜಯಮಂಗಳಂ ನಿತ್ಯ ಶುಭಮಂಗಳಂ


ಜಯಮಂಗಳಂ ನಿತ್ಯ ಶುಭಮಂಗಳಂ

ಇಂದೀವರಾಕ್ಷಗೆ ಇಭರಾಜವರದಗೆ
ಇಂದಿರಾರಮಣ ಗೋವಿಂದ ಹರಿಗೆ
ನಂದನ ಕಂದಗೆ ನವನೀತ ಚೋರಗೆ
ವೃಂದಾರಕೇಂದ್ರ ಉಡುಪಿಯ ಕೃಷ್ಣಗೆ

ಕ್ಷೀರಾಬ್ಧಿವಾಸಗೆ ಕ್ಷಿತಿಜನ ಪಾಲಗೆ
ಮಾರನನು ಪಡೆದ ಮಂಗಲಮೂರ್ತಿಗೆ
ಚಾರುಚರಣದಿಂದ ಚೆಲುವ ಗಂಗೆಯ ಪಡೆದ
ಕಾರುಣ್ಯಮೂರ್ತಿ ಕೌಸ್ತುಭಧಾರಿಗೆ

ವ್ಯಾಸಾವತಾರಗೆ ವೇದ ಉದ್ಧಾರಗೆ
ವಾಸಿತಾನಂತಪದ ಸಕಲೇಶಗೆ
ವಾಸುದೇವನ ಮೂರ್ತಿ ಪುರಂದರವಿಟ್ಠಲಗೆ
ದಾಸರನು ಕಾಯ್ವ ರುಕ್ಮಿಣಿರಮಣಗೆ

No comments: