ಜಾಲಿಯ ಮರದಂತೆ ಧರೆಯೊಳು ದುರ್ಜನರು


ಜಾಲಿಯ ಮರದಂತೆ ಧರೆಯೊಳು ದುರ್ಜನರು

ಮೂಲಾಗ್ರ ಪರಿಯಂತೆ ಮುಳ್ಳು ಕೂಡಿಪ್ಪಂತೆ

ಬಿಲಿಲಲ್ಲಿ ಬಳಲಿ ಬಂದವರಿಗೆ ನೆರಳಿಲ್ಲ
ಹಸಿದು ಬಂದವರಿಗೆ ಹಣ್ಣು ಇಲ್ಲ
ಕುಸುಮ ವಾಸನೆಯಿಲ್ಲ ಕೂಡಲು ಸ್ಥಳವಿಲ್ಲ
ರಸದಲ್ಲಿ ಸ್ವಾದವು ವಿಷದಂತೆ ಇರುತಿಹ


ಊರ ಹಂದಿಗೆ ಷಡ್ರಸಾನ್ನವನಿಕ್ಕಲು
ನಾರುವ ದುರ್ಗಂಧ ಬಿಡಬಲ್ಲುದೆ
ಘೋರಪಾಪಿಗೆ ತತ್ವಜ್ಞಾನವ ಪೇಳಲು
ಕ್ರೂರ ಕರ್ಮವ ಬಿಟ್ಟು ಸುಜನನಾಗುವನೆ


ತನ್ನಿಂದ ಉಪಕಾರ ತೊಟಕಾದರು ಇಲ್ಲ
ಬಿನ್ನಾಣದ ಮಾತಿಗೆ ಕೊನೆಯಿಲ್ಲ
ಅನ್ನಕ್ಕೆ ಸೇರಿದ ಕುನ್ನಿ ಮಾನವರಂತೆ
ಇನ್ನಿವರ ಕಾರ್ಯವು ಪುರಂದರವಿಠಲ

1 comment:

Anonymous said...

ಬಧಹಗಹ