ದುರಿತಗಜ ಪಂಚಾನನ

ದುರಿತಗಜ ಪಂಚಾನನ ನರ-
ಹರಿಯೆ ದೇವರ ದೇವ ಕಾಯಬೇಕೆನ್ನ

ಹೆತ್ತ ಮಕ್ಕಳು ಮರುಳಾದರೆ ತಾಯ್ತಂದೆ
ಎತ್ತದೆ ನೆಲಕೆ ಬಿಸುಡುವರೆ ಗೋವಿಂದ

ಅರಸು ಮುಟ್ಟಲು ದಾಸಿ ರಂಭೆಯು ದೇವ
ಪರುಷ ಮುಟ್ಟಲು ಲೋಹ ಹೊನ್ನು ಗೋವಿಂದ

ಹೆಸರುಳ್ಳ ನದಿಗಳನೊಳಗೊಂಬ ಜಲಧಿಯು
ಬಿಸುಡುವನೆ ಕಾಲುಹೊಳೆಗಳನು ಗೊವಿಂದ

ಮುನ್ನ ಮಾಡಿದ ಕರ್ಮ ಬೆನ್ನಟ್ಟಿ ಬಂದರೆ
ನಿನ್ನನ್ನು ಮರೆಹೋಗಲೇಕೆ ಗೋವಿಂದ

ಸ್ಮರಣೆಮಾತ್ರಕಜಾಮಿಳಗೆ ಮುಕ್ತಿಯನಿತ್ತೆ
ವರದ ಪುರಂದರವಿಠಲ ಗೋವಿಂದ


No comments: