
ಪರಮಲೋಭಿ ಎಂಬುದರಿಯೆ ಶ್ರೀಹರಿಯೆ
ಕಾಡಿ ಬೇಡುವರಿಗೆ ಕೊಡಲಾರದೆ ಅಂಜಿ
ಓಡಿ ನೀರೊಳು ಸೇರಿಕೊಂಡೆ ಬೇಗ
ಹೇಡಿಯ ತೆರೆದಲಿ ಮೋರೆಯ ತೋರದೆ
ಓಡಿ ಅರಣ್ಯದಿ ಮೃಗಗಳ ಸೇರ್ದೆ
ಬಡವರ ಬಿನ್ನಹ ಲಾಲಿಸದೆ ಹಲ್ಲ
ಕಡು ಕೋಪದಲಿ ತೆರೆದಂಜಿಸಿದೆ
ತಡೆಯದೆ ಭಿಕ್ಷುಕನಾದರೆ ಬಿಡರೆಂದು
ಕೊಡಲಿಯ ಪಿಡಿದು ಕೋಡಗಹಿಂಡ ಕಾಯ್ದೆ
ಉತ್ತಮನೆಂದರೆ ಮತ್ತೆ ಚೋರನಾದೆ
ಬತ್ತಲೆ ನಿಂತೆ ತೇಜಿಯನೇರಿದೆ
ಎತ್ತಹೋದರು ಬಿಡೆ ಮತ್ತೆ ನಿನ್ನನು ದೇವ
ಚಿತ್ತಜಜನಕ ಶ್ರೀ ಪುರಂದರವಿಠಲ
ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ
No comments:
Post a Comment