ನೀನೆ ಅನಾಥಬಂಧು ಕಾರುಣ್ಯಸಿಂಧು

ನೀನೆ ಅನಾಥಬಂಧು ಕಾರುಣ್ಯಸಿಂಧು

ಮದಗಜವೆಲ್ಲ ಕೂಡಿದರೇನು ಅದರ ವ್ಯಾಳ್ಯಕೆ ಒದಗಲಿಲ್ಲ
ಮದನನಯ್ಯ ಮಧುಸೂದನ ಎನ್ನಲು
ಮುದದಿಂದಲಿ ಬಂದೊದಗಿದೆ ಕೃಷ್ಣಾ

ಪತಿಗಳೈವರಿದ್ದರೇನು ಸತಿಯ ಭಂಗ ಬಿಡಿಸಲಿಲ್ಲ
ಗತಿ ನೀನೇ ಮುಕುಂದ ಎನ್ನಲು
ಅತಿವೇಗದಿ ಅಕ್ಷಯವಿತ್ತೆ ಕೃಷ್ಣಾ

ಶಿಲೆಯ ರಕ್ಷಿಸಿ ಕುಲಕೆ ತಂದೆ
ಬಲಿಗೆ ಒಲಿದು ಪದವಿಯಿತ್ತೆ
ಸುಲಭದಿ ಭಕ್ತರ ಸಲುಹುವ ನಮ್ಮ
ಚೆಲುವ ಪುರಂದರವಿಟ್ಠಲರಾಯ

1. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ

2. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ

No comments: