ಬಂದದ್ದೆಲ್ಲ ಬರಲಿ

ಬಂದದ್ದೆಲ್ಲ ಬರಲಿ ಗೋವಿಂದನ ದಯ ನಮಗಿರಲಿ

ಇಂದಿರೆ ರಮಣನ ಧ್ಯಾನವ ಮಾಡಲು
ಬಂದ ದುರಿತ ಬಯಲಾದುದಿಲ್ಲವೆ

ಅರಗಿನ ಮನೆಯೊಳಗಂದು ಪಾಂಡವರನು ಕೊಲಬೇಕೆಂದು
ದುರುಳ ಕೌರವ ಬಂದು ಅತಿ ಹರುಷದಲಿರುತಿರಲಂದು
ಹರಿ ಕೃಪೆ ಅವರಲ್ಲಿದ್ದ ಕಾರಣ ಬಂದ
ಘೋರ ದುರಿತ ಬಯಲಾದುದಿಲ್ಲವೆ?

ಆರು ಒಲಿಯದಿರಲೆನ್ನ ಮುರಾರಿ ಎನಗೆ ಪ್ರಸನ್ನ
ಹೋರುವ ದುರಿತದ ಬನ್ನ ನಿವಾರಿಪ ಕರುಣ ಸಂಪನ್ನ
ಶ್ರೀರಮಣನ ಸಿರಿ ಚರಣ ಶರಣರಿಗೆ
ಕ್ರೂರ ಯಮನು ಶರಣಾಗಲಿಲ್ಲವೆ?

ಸಿಂಗನ ಪೆಗಲೇರಿದವಗೆ ಕರಿ ಭಂಗವೇಕೆ ಮತ್ತವಗೆ
ರಂಗನ ಕೃಪೆಯುಳ್ಳವಗೆ ಭವ ಭಂಗಗಳೇತಕ್ಕವಗೆ
ಮಂಗಳ ಮಹಿಮ ಪುರಂದರವಿಠಲ ಶು-
ಭಾಂಗನ ದಯವೊಂದಿದ್ದರೆ ಸಾಲದೆ

No comments: