ಯಾಕೆ ಚಿಂತಿಸುತಿದ್ದಿ ಕೋತಿಮನವೆ

ಯಾಕೆ ಚಿಂತಿಸುತಿದ್ದಿ ಕೋತಿಮನವೆ
ಲೋಕನಾಥನ ನೆನೆದು ಸುಖಿಯಾಗು ಮನವೆ

ಹುಟ್ಟುವಾಗಾಪತ್ತಿಗಾರು ಚಿಂತಿಸಿದವರು
ಕಟ್ಟಕಡೆಯಲಿ ಲಯಕೆ ಯಾರ ಚಿಂತೆ
ನಟ್ಟನಡುವಿನ ಬಾಳಿಗೇಕೆ ಚಿಂತಿಸುತಿರುವೆ
ಹುಟ್ಟಿದವರಿಗೆ ಮೂರು ಬಟ್ಟಿಲ್ಲವೆ ಮರುಳೆ

ನವಿಲಿಗೆ ಚಿತ್ರಪತ್ರವನಾರು ಬರೆದವರು
ಪವಳದ ಲತೆಗೆ ಕೆಂಪಿಟ್ಟವರು ಯಾರು
ಸವಿಮಾತಿನರಗಿಣಿಗೆ ಹಸುರು ಬಳಿದವರಾರು
ಅವ ಮಾಡಿದವ ನಮ್ಮ ಮರೆತಿಹನೆ ಮರುಳೆ

ಬಸುರೊಳಗೆ ಶಿಶುವನು ಅದಾರು ಸಲಹಿದವರು
ವಸುಧೆಯನು ಬಸುರೊಳಗೆ ಇಟ್ಟವರು ಯಾರು
ಹಸಗೆಡದೆ ನಮ್ಮ ಶ್ರೀ ಪುರಂದರವಿಠಲನ
ಬಿಸಜಪಾದವ ನಂಬಿ ಸುಖಿಯಾಗು ಮರುಳೆ

ರಾಗ: ಭೈರವಿ                  ತಾಳ: ಝಂಪೆ


No comments: