
ಪಾಮರರು ತಾವೇನು ಬಲ್ಲರಯ್ಯ
ರಾ ಎಂದ ಮಾತ್ರದೊಳು ರಕ್ತಮಾಂಸದೊಳಿದ್ದ
ಆಯಸ್ತವಾದ ಅತಿ ಪಾಪವನ್ನು
ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ
ದಾಯವನು ವಾಲ್ಮೀಕಿ ಮುನಿರಾಯ ಬಲ್ಲ
ಮತ್ತೆ ಮ ಎಂದೆನಲು ಹೊರಬಿದ್ದ ಪಾಪಗಳು
ಒತ್ತಿ ಒಳಪೊಗದಂತೆ ಕವಾಟವಾಗಿ
ಚಿತ್ತಕಾಯಗಳ ಪವಿತ್ರಮಾಡುವ ಪರಿಯ
ಭಕ್ತವರ ಹನುವಂತನೊಬ್ಬ ತಾ ಬಲ್ಲ
ಧರೆಯೊಳೀ ನಾಮಕ್ಕೆ ಸರಿಮಿಗಿಲು ಇಲ್ಲೆಂದು
ಪರಮ ವೇದಗಳೆಲ್ಲ ಪೊಗಳುತಿಹವು
ಸಿರಿಯರಸ ಪುರಂದರವಿಟ್ಠಲನ ನಾಮವನು
ಸಿರಿ ಕಾಶಿಯೊಳಗಿಪ್ಪ ಶಿವನು ತಾ ಬಲ್ಲ
ರಾಗ: ಕಾಂಬೋದಿ ತಾಳ: ಝಂಪೆ
1. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ
2. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ
No comments:
Post a Comment